Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆರು ದಿನಗಳು ಕೆಲಸಮಾಡಬೇಕು; ಏಳನೆಯ ದಿವಸ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ; ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಯೆಹೋವ ದೇವರಿಗೆ ಪರಿಶುದ್ಧವಾದ ಸಬ್ಬತ್ ದಿನ. ಆ ಸಬ್ಬತ್ ದಿನದಲ್ಲಿ ಕೆಲಸ ಮಾಡುವವರೆಲ್ಲಾ ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:15
21 ತಿಳಿವುಗಳ ಹೋಲಿಕೆ  

ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.


“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.


“ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.


ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.


ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;


ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”


ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.


ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ” ಎಂದು ಹೇಳಿದನು.


ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.


ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.


ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು” ಹೇಳಿದನು.


“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.


“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು