Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ರತ್ನಗಳನ್ನು ಕೆತ್ತುವದಕ್ಕೂ ಮರದಲ್ಲಿ ವಿಚಿತ್ರವಾಗಿ ಕೆತ್ತನೇ ಕೆಲಸವನ್ನು ಮಾಡುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:3
12 ತಿಳಿವುಗಳ ಹೋಲಿಕೆ  

ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.


ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.


ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.


ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,


ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”


ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.


ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು