Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೊಲೀಯಾಬನನ್ನೂ ನೇವಿುಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವದಕ್ಕೆ ಜಾಣರೆಲ್ಲರ ಹೃದಯದಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:6
26 ತಿಳಿವುಗಳ ಹೋಲಿಕೆ  

ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ.


“ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.


ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.


ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.


ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.


ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.


ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”


ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.


ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: “ಯೆಹೋವನು ಆಜ್ಞಾಪಿಸಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು