Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:12
32 ತಿಳಿವುಗಳ ಹೋಲಿಕೆ  

ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.


ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ


ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


“ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.


ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.


ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.


ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.


ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.


“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.


ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.


ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”


ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು