Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವದಕ್ಕೆ ಆರೋನನು ಅವರನ್ನು ಬಿಟ್ಟದ್ದರಿಂದ ಅವರ ವಿರೋಧಿಗಳು ಅಪಹಾಸ್ಯ ಮಾಡುವದಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೋಶೆಯು ಜನರು ಕ್ರಮವಿಲ್ಲದಿರುವುದನ್ನು ಕಂಡನು. ಆರೋನನು ಅವರನ್ನು ಮಿತಿಮೀರಿ ಇಷ್ಟಬಂದಂತೆ ಮಾಡುವದಕ್ಕೆ ಅವಕಾಶ ಮಾಡಿಕೊಟ್ಟದ್ದರಿಂದ ಅವರ ವೈರಿಗಳ ಮುಂದೆ ಅಪಹಾಸ್ಯಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:25
17 ತಿಳಿವುಗಳ ಹೋಲಿಕೆ  

ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.


“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.


ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.


ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.


ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.


ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು