Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರು ಕ್ರಮವಿಲ್ಲದೆ ಸ್ವೇಚ್ಫೆಯಾಗಿ ನಡೆದುಕೊಳ್ಳುವದನ್ನು ಮೋಶೆ ನೋಡಿ ಪಾಳೆಯದ ಬಾಗಲಲ್ಲಿ ನಿಂತುಕೊಂಡು - ಯೆಹೋವನ ಪಕ್ಷದವರೆಲ್ಲರು ನನ್ನ ಬಳಿಗೆ ಬರಬೇಕು ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮೋಶೆಯು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವ ದೇವರ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಲಿ,” ಎಂದನು. ಆಗ ಲೇವಿಯರೆಲ್ಲರು ಅವನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:26
8 ತಿಳಿವುಗಳ ಹೋಲಿಕೆ  

ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು


ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ” ಎಂದು ಕೂಗಿದನು


ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,


ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.


ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು