Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋಶೆ ಆ ಲೇವಿಯರಿಗೆ, “ಈದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆ [ಲೇವಿಯರಿಗೆ] - ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಳ್ಳಬೇಕು; ಹಾಗಾದರೆ ಆತನು ಈ ಹೊತ್ತೇ ನಿಮ್ಮನ್ನು ಆಶೀರ್ವದಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡುಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:29
11 ತಿಳಿವುಗಳ ಹೋಲಿಕೆ  

ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.


ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.


ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು