Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:4
36 ತಿಳಿವುಗಳ ಹೋಲಿಕೆ  

ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,


ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.


ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?


ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.


ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.


ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.


ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.


ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.


ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.


ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು.


ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.


ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.


ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು.


ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.


ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.


ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.


“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.


ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.


ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು