Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆರೋನನು ಅದನ್ನು ನೋಡಿ ಬಸವನಿಗೆ ಎದುರಾಗಿ ಯಜ್ಞವೇದಿಯನ್ನು ಕಟ್ಟಿಸಿ - ನಾಳೆ ಯೆಹೋವನಿಗೆ ಉತ್ಸವವಾಗಬೇಕು ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:5
18 ತಿಳಿವುಗಳ ಹೋಲಿಕೆ  

ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.


“‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.


ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.


ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”


ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ.


ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.


ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.


ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,


ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.


ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಮೋಶೆ ಅವನಿಗೆ, “ನಾವು ಯೆಹೋವನಿಗೆ ಜಾತ್ರೆಯನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು ಮೊದಲುಗೊಂಡು, ಮುದುಕರವರೆಗೂ ಎಲ್ಲರೂ ಹೋಗುತ್ತೇವೆ; ಗಂಡು ಹೆಣ್ಣುಮಕ್ಕಳನ್ನೂ, ದನಕುರಿಗಳ ಮಂದೆಯನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಉತ್ತರಕೊಟ್ಟನು.


ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು