Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:8
18 ತಿಳಿವುಗಳ ಹೋಲಿಕೆ  

ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.


ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.


ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.


ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’


ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.


ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.


ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,


ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು