Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಲ್ಲದೆ ಯೆಹೋವನು ಮೋಶೆಗೆ - ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ; ಇವರು ನನ್ನ ಆಜ್ಞೆಗೆ ಬೊಗ್ಗದವರಾಗಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯೆಹೋವ ದೇವರು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:9
19 ತಿಳಿವುಗಳ ಹೋಲಿಕೆ  

“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.


“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.


ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.


ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.


ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.


ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.


ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.


ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?


ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.


ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು