Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನಗೆ ನಿನ್ನ ದಯೆ ದೊರಕಿದ್ದಾದರೆ ನಾನು ನಿನ್ನನ್ನು ಬಲ್ಲವನಾಗಿರುವಂತೆ ನಿನ್ನ ಮಾರ್ಗವನ್ನು ನನಗೆ ತೋರಿಸು; ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿದಿರುವದು; ಈ ಜನವು ನಿನ್ನ ಪ್ರಜೆಯೆಂದು ಜ್ಞಾಪಕಮಾಡಿಕೋ ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ನಿನ್ನನ್ನು ನಿಜವಾಗಿಯೂ ಮೆಚ್ಚಿಸಿರುವುದಾದರೆ, ನಾನು ನಿನ್ನನ್ನು ತಿಳಿದುಕೊಳ್ಳುವಂತೆ ನಿನ್ನ ಮಾರ್ಗಗಳನ್ನು ಬೋಧಿಸು. ಆಗ ನಾನು ನಿನ್ನನ್ನು ಯಾವಾಗಲೂ ಮೆಚ್ಚಿಸಲು ಸಾಧ್ಯವಾಗುವುದು. ಇವರೆಲ್ಲರೂ ನಿನ್ನ ಜನರೆಂದು ಜ್ಞಾಪಕಮಾಡಿಕೊ” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗಾದರೆ ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆಕಿದ್ದೇ ಆದರೆ ನಾನು ನಿಮ್ಮನ್ನು ತಿಳಿಯುವ ಹಾಗೆ, ನಿಮ್ಮ ಮಾರ್ಗವನ್ನು ನನಗೆ ತೋರಿಸಿ. ಆಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದು. ಈ ಜನಾಂಗವು ನಿಮ್ಮ ಜನರೇ, ಎಂದು ಜ್ಞಾಪಿಸಿಕೊಳ್ಳುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:13
27 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.


ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.


ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.


ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.


ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.


ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.


ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.


ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.


ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು