Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:19
16 ತಿಳಿವುಗಳ ಹೋಲಿಕೆ  

ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.”


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.


ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು