Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು. ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ, ಬದಲುಕೊಟ್ಟು ಬಿಡಿಸಲೇಬೇಕು. ಯಾರೂ ಬರೀಗೈಯಲ್ಲಿ ನನ್ನ ಮುಂದೆ ಕಾಣಿಸಿಕೊಳ್ಳಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ ಬದಲು ಕೊಟ್ಟು ಬಿಡಿಸಲೇಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:20
11 ತಿಳಿವುಗಳ ಹೋಲಿಕೆ  

ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.


ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.


ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.


ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.


ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.


ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.


ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು