Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಗಂಡಸರೆಲ್ಲರು ಇಸ್ರಯೇಲರ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲ್ಯರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ನೆರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ವರುಷಕ್ಕೆ ಮೂರು ಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಸಾರ್ವಭೌಮ ಯೆಹೋವ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:23
9 ತಿಳಿವುಗಳ ಹೋಲಿಕೆ  

ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.


ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.


ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.


ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು