Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:6
47 ತಿಳಿವುಗಳ ಹೋಲಿಕೆ  

ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.


ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.


ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.


ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.


ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.


ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.


ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.


ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.


ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.


ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.


ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.


ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.


ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,


ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.


ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.


ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು.


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.


“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.


ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು