Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:7
57 ತಿಳಿವುಗಳ ಹೋಲಿಕೆ  

ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.


ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.


ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.


ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.


ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.


ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ,


ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.


ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.


ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.


ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.


ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.


“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.


ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು


ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.


ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.


ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು