Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸಿದ್ಧಚಿತ್ತರಾದ ಗಂಡಸರೂ ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:22
18 ತಿಳಿವುಗಳ ಹೋಲಿಕೆ  

ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.


ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,


ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.


ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.


ಜುಮುಕಿ, ಬಳೆ, ಶಿರವಸ್ತ್ರ,


ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.


ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು.


ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.


ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.


ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.


ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,


ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು