Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಚಿನ್ನ, ಬೆಳ್ಳಿ, ತಾಮ್ರಗಳಿಂದ ಕೆಲಸ ನಡೆಸುವುದಕ್ಕೂ, ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ವಿಚಿತ್ರ ಕೆತ್ತನೆ ಕೆಲಸ ಮಾಡುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಚಿನ್ನ ಬೆಳ್ಳಿ ತಾಮ್ರಗಳಿಂದ ಕೆಲಸನಡಿಸುವದಕ್ಕೂ ರತ್ನಗಳನ್ನು ಕೆತ್ತುವದಕ್ಕೂ ಮರದಲ್ಲಿ ವಿಚಿತ್ರವಾಗಿ ಕೆತ್ತನೇ ಕೆಲಸವನ್ನು ಮಾಡುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿ, ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:31
13 ತಿಳಿವುಗಳ ಹೋಲಿಕೆ  

ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.


ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,


ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.


ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ,


ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”


ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು