Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಶಿಲ್ಪಿಗಳು, ಚಮತ್ಕಾರವಾದ ಕೆಲಸ ಕಲ್ಪಿಸುವವರು, ನೀಲಿ ಧೂಮ್ರರಕ್ತವರ್ಣದ ದಾರದಿಂದಲೂ ನಾರುಬಟ್ಟೆಯಿಂದಲೂ ಬುಟೇದಾರೀ ಕೆಲಸಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ನಡಿಸುವ ಕೆಲಸಗಳನ್ನು ಕಲ್ಪಿಸುವದಕ್ಕೂ ಮಾಡುವದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಕೆತ್ತನೆಯ ಕೆಲಸಗಳನ್ನು, ವಿನ್ಯಾಸದ ಕೆಲಸಗಳನ್ನು, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ, ನಯವಾದ ನಾರುಬಟ್ಟೆ ಇವುಗಳಲ್ಲಿ ಕಸೂತಿ ಕೆಲಸಗಳನ್ನು ಮಾಡುವುದಕ್ಕೆ ಮತ್ತು ನೇಯ್ಗೆಯ ಕೆಲಸ ಮಾಡುವುದಕ್ಕೆ ಎಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಯೆಹೋವ ದೇವರು ಅವರಿಗೆ ಜ್ಞಾನವನ್ನು ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:35
23 ತಿಳಿವುಗಳ ಹೋಲಿಕೆ  

ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,


ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.


ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,


ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?


ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು


ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,


ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.


ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.


ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.


ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.


ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.


“ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು