Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ದೇವಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಾಯೇಲ್ಯರು ಪ್ರತಿದಿನದ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಹೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಪರಿಶುದ್ಧ ಆಲಯದ ನಿರ್ಮಾಣಕ್ಕೋಸ್ಕರ ಇಸ್ರಾಯೇಲರು ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ತೆಗೆದುಕೊಂಡರು. ಇದಲ್ಲದೆ ಅವರು ಪ್ರತಿದಿನ ಬೆಳಿಗ್ಗೆ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:3
11 ತಿಳಿವುಗಳ ಹೋಲಿಕೆ  

ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.


ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.


ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.


ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.


ಅಧಿಪತಿಗಳು ಏಫೋದ್ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ಎದೆಪದಕದಲ್ಲಿ ಇಡಬೇಕಾದ ರತ್ನಗಳನ್ನು,


ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.


ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,


ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು