Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:29
18 ತಿಳಿವುಗಳ ಹೋಲಿಕೆ  

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.


ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.


ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.


ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು