Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವದರ್ಶನದ ಗುಡಾರವನ್ನು ಮಾಡುವದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕ. ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:21
31 ತಿಳಿವುಗಳ ಹೋಲಿಕೆ  

“ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.


ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?


ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.


ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.


ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.


ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,


ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.


ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.


ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.


ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?


ಆಗ ಯೋಬನು ಹೀಗೆ ಉತ್ತರಕೊಟ್ಟನು,


ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.


‘ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ’ ಎಂದು ನೀನು ಹೇಳಿದ್ದೀಯಲ್ಲಾ.


ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.


ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.


ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.


ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು.


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು