Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಮೋಶೆ ಉತ್ತರ ನೀಡಿ,” ಆಲಿಸಬೇಕು; ಆ ಜನರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋಗಬಹುದು: ‘ಸರ್ವೇಶ್ವರ ಸ್ವಾಮಿ ನಿನಗೆ ಕಾಣಿಸಿಕೊಂಡಿದ್ದೇ ಇಲ್ಲ’ ಎಂದು ಹೇಳಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದಕ್ಕೆ ಮೋಶೆ - ಚಿತ್ತೈಸು; ಅವರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋದಾರು; ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲವೆಂದು ಹೇಳಾರು ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:1
14 ತಿಳಿವುಗಳ ಹೋಲಿಕೆ  

ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.


ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.


ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.


ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.


ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.


ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಕಣ್ಣುಗಳ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು.


ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.


ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.


ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು