Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:23
22 ತಿಳಿವುಗಳ ಹೋಲಿಕೆ  

ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.


ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.


ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.


ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು.


ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.


‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.


“ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು.


ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.


ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.


ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.


ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.


ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು.


ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.


ನೀನು ಅವರಿಗೆ ಅಪ್ಪಣೆ ಕೊಡದೆ ಇನ್ನೂ ಅವರನ್ನು ತಡೆದರೆ,


ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.


ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು