Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಲಿಪೀಠವನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಬಲಿಪೀಠವನ್ನು ಪ್ರತಿಷ್ಠಾಪಿಸು. ಅದು ಪರಮಪವಿತ್ರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಜ್ಞವೇದಿಕೆಯನ್ನು ಅಭಿಷೇಕಿಸು. ವೇದಿಕೆಯ ಮೇಲಿರುವ ಪ್ರತಿಯೊಂದನ್ನು ಅಭಿಷೇಕಿಸಿ ಪ್ರತಿಷ್ಠಿಸು. ಆಗ ಅದು ಬಹು ಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಹನಬಲಿಯ ಪೀಠವನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ನೀನು ಅಭಿಷೇಕಿಸಿ, ಬಲಿಪೀಠವನ್ನು ಪವಿತ್ರಮಾಡು. ಆಗ ಅದು ಅತಿಪರಿಶುದ್ಧವಾದ ಬಲಿಪೀಠವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:10
13 ತಿಳಿವುಗಳ ಹೋಲಿಕೆ  

ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.


ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.


ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.


ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು