Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:33
21 ತಿಳಿವುಗಳ ಹೋಲಿಕೆ  

ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.


ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.


ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.


ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.


ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.


ಸೊಲೊಮೋನನು ದೇವಾಲಯವನ್ನು ಕಟ್ಟಿಸಿ ಮುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು