Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವದರಿಂದಲೂ ಯೆಹೋವನ ತೇಜಸ್ಸು ಗುಡಾರದೊಳಗೆ ತುಂಬಿರುವದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವದರ್ಶನದ ಗುಡಾರದ ಮೇಲೆ ಮೇಘವು ನೆಲೆಯಾಗಿದ್ದದರಿಂದಲೂ, ಯೆಹೋವ ದೇವರು ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿದ್ದರಿಂದಲೂ, ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:35
15 ತಿಳಿವುಗಳ ಹೋಲಿಕೆ  

ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.


ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.


ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.


“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.


ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.


ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.


ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.


ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.


ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.


ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು