Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಾನಲ್ಲಾ; ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲೇ ಇಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಫರೋಹನ ಬಳಿಗೆ ಹೋಗಿ ನೀನು ಹೇಳಿದ್ದನ್ನೇ ತಿಳಿಸಿದೆ. ಆದರೆ ಅಂದಿನಿಂದ ಅವನು ಜನರನ್ನು ಕೀಳಾಗಿ ಕಾಣುತ್ತಿದ್ದಾನೆ. ಅಲ್ಲದೆ ನೀನೂ ನಿನ್ನ ಜನರಿಗೆ ಸಹಾಯ ಮಾಡುತ್ತಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:23
9 ತಿಳಿವುಗಳ ಹೋಲಿಕೆ  

ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.


ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.


ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.


ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು