Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಅವರಿಂದ ಇನ್ನೂ ಕಷ್ಟಕರವಾದ ಕೆಲಸ ಮಾಡಿಸಬೇಕು. ಕೆಲಸ ಹೆಚ್ಚಾದರೆ ಸುಳ್ಳುಪೊಳ್ಳು ಮಾತುಗಳಿಗೆ ಕಿವಿಗೊಡಲು ಆಸ್ಪದಯಿರುವುದಿಲ್ಲ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಅವರಿಂದ ಕಷ್ಟವಾದ ಬಿಟ್ಟೀಕೆಲಸವನ್ನು ಮಾಡಿಸಬೇಕು. ಅವರಿಗೆ ಕಷ್ಟವಾದ ಕೆಲಸವಿದ್ದರೆ ಸುಳ್ಳು ಮಾತುಗಳಿಗೆ ಲಕ್ಷ್ಯ ಕೊಡುವದಕ್ಕೆ ಮಾರ್ಗವಿಲ್ಲ ಎಂದು ಆಜ್ಞೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಜನರಿಗೆ ಇನ್ನೂ ಕಷ್ಟಕರವಾದ ಕೆಲಸವನ್ನು ಕೊಡಿರಿ. ಅವರು ಕಾರ್ಯಮಗ್ನರಾಗಿರುವಂತೆ ನೋಡಿಕೊಳ್ಳಿರಿ. ಆಗ ಅವರಿಗೆ ಮೋಶೆಯ ಸುಳ್ಳುಗಳನ್ನು ಕೇಳುವುದಕ್ಕೆ ಸಮಯವಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಜನರು ಸುಳ್ಳು ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ. ಅವರು ದುಡಿಯಲಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:9
8 ತಿಳಿವುಗಳ ಹೋಲಿಕೆ  

ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.


ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ?


ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?


ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.


ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು