Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:1
27 ತಿಳಿವುಗಳ ಹೋಲಿಕೆ  

ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.


ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.


ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.


ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.


ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?


ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.


ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.


ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.


ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.


ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.


ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು