Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:4
21 ತಿಳಿವುಗಳ ಹೋಲಿಕೆ  

ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,


ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಆತನು, “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು” ಎಂದು ಹೇಳಿದನು.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.


ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.


“ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,


ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.


“ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.


ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.


ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.


ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.


ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.


ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು