Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದನಷ್ಟೆ; ಈವರೆಗೂ ನೀನು ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:16
18 ತಿಳಿವುಗಳ ಹೋಲಿಕೆ  

ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.


ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.


ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.


ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.


ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.


ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.


ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.


ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು