Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:17
30 ತಿಳಿವುಗಳ ಹೋಲಿಕೆ  

ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.


ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


“ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ, ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.


“‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.


ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.


ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು.


ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.


ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.


ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು.


ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನ ರಕ್ತದಿಂದ ತುಂಬುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು