Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜನರು ಅವುಗಳನ್ನು ರಾಶಿ ರಾಶಿಯಾಗಿ ಕೂಡಿಸಿದರು. ದೇಶವೆಲ್ಲಾ ದುರ್ವಾಸನೆಯಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಲು ದೇಶದಲ್ಲೆಲ್ಲಾ ದುರ್ವಾಸನೆ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:14
11 ತಿಳಿವುಗಳ ಹೋಲಿಕೆ  

ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.


“ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.


ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.


ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.


ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.


ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.


ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.


ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.


ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು