Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:20
11 ತಿಳಿವುಗಳ ಹೋಲಿಕೆ  

ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು,


ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.


ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು.


ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.


ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.


ಆದರೆ ನೀನು, ನನ್ನ ಜನರಿಗೆ ಅಪ್ಪಣೆಕೊಡದೇ ಹೋದರೆ, ನಾನು ನಿನಗೂ, ನಿನ್ನ ಪರಿವಾರದವರಿಗೂ, ನಿನ್ನ ಮನೆಗಳಿಗೂ ನೊಣಗಳ ಕಾಟವುಂಟಾಗುವಂತೆ ಮಾಡುವೆನು. ಐಗುಪ್ತ್ಯರ ಮನೆಗಳಲ್ಲಿಯೂ, ಅವರ ಎಲ್ಲಾ ಭೂಮಿಗಳಲ್ಲಿಯೂ ಆ ನೊಣಗಳು ತುಂಬಿಕೊಳ್ಳುವವು.


ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.


ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು