Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ನನ್ನನ್ನೇ ಭೂಲೋಕದಲ್ಲಿ ಆಳುವ ಯೆಹೋವನು ಎಂದು ನೀನು ತಿಳುಕೊಳ್ಳುವಂತೆ ನಾನು ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ವಿಶೇಷಿಸುವೆನು; ಅಲ್ಲಿ ಆ ಕಾಟವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:22
19 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು.


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.


ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.


ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.


ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.


ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.


ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.


ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.


ಆದರೆ ನೀನು, ನನ್ನ ಜನರಿಗೆ ಅಪ್ಪಣೆಕೊಡದೇ ಹೋದರೆ, ನಾನು ನಿನಗೂ, ನಿನ್ನ ಪರಿವಾರದವರಿಗೂ, ನಿನ್ನ ಮನೆಗಳಿಗೂ ನೊಣಗಳ ಕಾಟವುಂಟಾಗುವಂತೆ ಮಾಡುವೆನು. ಐಗುಪ್ತ್ಯರ ಮನೆಗಳಲ್ಲಿಯೂ, ಅವರ ಎಲ್ಲಾ ಭೂಮಿಗಳಲ್ಲಿಯೂ ಆ ನೊಣಗಳು ತುಂಬಿಕೊಳ್ಳುವವು.


ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು.


ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


“ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು