Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ನನ್ನ ಜನರಿಗೂ ನಿನ್ನ ಜನರಿಗೂ ವ್ಯತ್ಯಾಸ ಉಂಟುಮಾಡುವೆನು. ನಾಳೆಯೇ ಈ ಸೂಚಕಕಾರ್ಯ ನಡೆಯುವುದು, ಎಂದು ಹೇಳು."

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ನಾಳೆಯೇ ಈ ಮಹತ್ಕಾರ್ಯವುಂಟಾಗುವದು ಅನ್ನಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ನಾಳೆ ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ಅದೇ ನನ್ನ ಸಾಕ್ಷಿ’ ಎಂದು ಹೇಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನ ಜನರನ್ನೂ, ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಸೂಚಕಕಾರ್ಯ ಕಾಣುವುದು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:23
6 ತಿಳಿವುಗಳ ಹೋಲಿಕೆ  

ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.


ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.


ಇದಲ್ಲದೆ ಯೆಹೋವನು, “ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು” ಎಂದನು.


ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.


ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು