Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಬಲಿಯಾಗಿ ಕೊಡುವ ಆಹುತಿ ಈಜಿಪ್ಟಿನವರಿಗೆ ನಿಷಿದ್ಧವಾದದ್ದು. ನಿಷಿದ್ಧವೆಂದು ಈಜಿಪ್ಟಿನವರು ತಿಳಿದುಕೊಂಡು ಇರುವ ಆಹುತಿಯನ್ನು ನಾವು ಅವರ ಕಣ್ಮುಂದೆಯೇ ಮಾಡಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಮೋಶೆ - ಹಾಗೆ ಮಾಡುವದು ಯುಕ್ತವಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞದಲ್ಲಿ ಕೊಡುವ ಆಹುತಿ ಐಗುಪ್ತ್ಯರಿಗೆ ನಿಷೇಧ. ನಿಷಿದ್ಧವೆಂದು ಐಗುಪ್ತ್ಯರು ತಿಳುಕೊಂಡಿರುವ ಆಹುತಿಯನ್ನು ನಾವು ಅವರ ಕಣ್ಣಿನ ಮುಂದೆ ಮಾಡಿದರೆ ಅವರು ನಮ್ಮನ್ನು ಕೊಲ್ಲುವದಕ್ಕೆ ಕಲ್ಲೆಸೆಯುವರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅದಕ್ಕೆ ಮೋಶೆ, “ಅದು ಸರಿಯಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಅರ್ಪಿಸುವ ಯಜ್ಞಗಳು ಈಜಿಪ್ಟಿನವರಿಗೆ ನಿಷಿದ್ಧವಾಗಿವೆ. ಹೀಗಿರಲು ಅವರ ಕಣ್ಣೆದುರಿಗೇ ಅಂಥ ಯಜ್ಞಗಳನ್ನು ಅರ್ಪಿಸಿದರೆ, ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಮೋಶೆಯು ಫರೋಹನಿಗೆ, “ಹಾಗೆ ಮಾಡುವುದು ಯುಕ್ತವಲ್ಲ. ಏಕೆಂದರೆ ನಮ್ಮ ಯೆಹೋವ ದೇವರಾದ ದೇವರಿಗೆ ಯಜ್ಞವನ್ನರ್ಪಿಸುವುದು ಈಜಿಪ್ಟಿನವರಿಗೆ ಅಸಹ್ಯವಾಗಿರುವುದು. ಈಜಿಪ್ಟಿನವರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಅರ್ಪಿಸಿದರೆ, ಅವರು ನಮ್ಮ ಮೇಲೆ ಕಲ್ಲೆಸೆದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:26
11 ತಿಳಿವುಗಳ ಹೋಲಿಕೆ  

“ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.


ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.


“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.


ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.


ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು