Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಮೋಶೆಯು, “ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದ ನಿನಗೂ, ನಿನ್ನ ಪರಿವಾರದವರಿಗೂ ನೊಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನು ಮುಂದೆ ವಂಚನೆಮಾಡಬಾರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಮೋಶೆ, “ನಿಮ್ಮ ಬಳಿಯಿಂದ ಹೊರಟಾಗಲೆ ಫರೋಹನಾದ ನಿಮಗೂ ನಿಮ್ಮ ಪ್ರಜಾಪರಿವಾರದವರಿಗೂ ನೊಣಗಳ ಕಾಟ ನಾಳೆಯಿಂದ ಇರಬಾರದೆಂದು ಸರ್ವೇಶ್ವರನಿಗೆ ಪ್ರಾರ್ಥನೆ ಮಾಡುತ್ತೇನೆ. ಆದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನೀವು ಜನರಿಗೆ ಅಪ್ಪಣೆಕೊಡದೆ ವಂಚನೆ ಮಾಡಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಮೋಶೆ - ನಾನು ನಿನ್ನ ಬಳಿಯಿಂದ ಹೊರಟಾಗ ಫರೋಹನಾದ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ಹುಳಗಳ ಬಾಧೆಯು ನಾಳೆಯಿಂದ ಇರಬಾರದೆಂಬದಾಗಿ ಯೆಹೋವನಿಗೆ ಪ್ರಾರ್ಥನೆ ಮಾಡುವೆನು. ಆದರೆ ಯೆಹೋವನಿಗೆ ಯಜ್ಞಮಾಡಲಿಕ್ಕೆ ನೀನು ಜನರಿಗೆ ಅಪ್ಪಣೆ ಕೊಡದೆ ಇನ್ನು ಮುಂದೆ ವಂಚನೆಮಾಡಬಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅದಕ್ಕೆ ಮೋಶೆ, “ನಾನು ಇಲ್ಲಿಂದ ಹೋದಾಗ, ನಿನಗೂ ನಿನ್ನ ಪ್ರಜೆಗಳಿಗೂ ನಿನ್ನ ಅಧಿಕಾರಿಗಳಿಗೂ ಹುಳಗಳ ಬಾಧೆ ನಾಳೆಯಿಂದ ಇರಬಾರದೆಂಬುದಾಗಿ ಯೆಹೋವನಿಗೆ ಪ್ರಾರ್ಥಿಸುವೆನು. ಆದರೆ ಮತ್ತೆ ನೀನು ವಂಚಿಸಿ ಜನರು ಯಜ್ಞಗಳನ್ನು ಸಮರ್ಪಿಸದಂತೆ ತಡೆಯಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಮೋಶೆಯು ಅವನಿಗೆ, “ನಾನು ನಿನ್ನನ್ನು ಬಿಟ್ಟು ಹೋಗಿ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ, ಅವನ ಸೇವಕರನ್ನೂ, ಅವರ ಜನರನ್ನೂ ಬಿಟ್ಟು ಹೋಗುವುವು. ಆದರೆ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುವುದಕ್ಕೆ ಫರೋಹನಾದ ನೀನು ಜನರನ್ನು ಕಳುಹಿಸದೆ ಇನ್ನು ಮೇಲೆ ವಂಚಿಸಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:29
9 ತಿಳಿವುಗಳ ಹೋಲಿಕೆ  

ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.


ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು” ಎಂದನು.


ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು