Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ಇರುವವು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಅಧಿಕಾರಿಗಳ ಮೇಲೆಯೂ ಕಪ್ಪೆಗಳು ಏರಿ ಬರುವುವು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:4
13 ತಿಳಿವುಗಳ ಹೋಲಿಕೆ  

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.


ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.


ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು” ಎಂದು ಹೇಳಬೇಕು ಎಂದನು.


ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.


ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.


ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.


ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು