Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ಮೋಶೆ ಫರೋಹನಿಗೆ, “ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು” ಎಂದು ಫರೋಹನನ್ನು ವಿನಂತಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಮೋಶೆ, "ಈ ಕಪ್ಪೆಗಳು ತಮ್ಮ ಬಳಿಯಿಂದಲೂ ತಮ್ಮ ಮನೆ ಮಾರುಗಳಿಂದಲೂ ತೊಲಗಿಹೋಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ತಮ್ಮ ಪರವಾಗಿ, ತಮ್ಮ ಪ್ರಜಾಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ತಮ್ಮ ಘನಚಿತ್ತಕ್ಕೆ ಸರಿತೋರಿದಂತೆ ತಾವೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ - ಘನಚಿತ್ತಕ್ಕೆ ತೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನೇವಿುಸಬೇಕು. ಈ ಕಪ್ಪೆಗಳು ಯಾವಾಗ ನಿನ್ನ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ನಿನಗೋಸ್ಕರವೂ ನಿನ್ನ ಪ್ರಜಾಪರಿವಾರದವರಿಗೋಸ್ಕರವೂ ಬೇಡಿಕೊಳ್ಳಲಿ ಎಂದು ಫರೋಹನನ್ನು ಕೇಳಲು ಅವನು - ನಾಳೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಶೆಯು ಫರೋಹನಿಗೆ, “ಕಪ್ಪೆಗಳು ಯಾವಾಗ ಬಿಟ್ಟುಹೋಗಬೇಕೆಂದು ತಿಳಿಸು. ನಾನು ನಿನಗೋಸ್ಕರ, ನಿನ್ನ ಜನರಿಗೋಸ್ಕರ ಮತ್ತು ನಿನ್ನ ಅಧಿಕಾರಿಗಳಿಗೋಸ್ಕರ ಪ್ರಾರ್ಥಿಸುವೆನು. ಆಗ ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿಯುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಮೋಶೆ, “ಈ ಕಪ್ಪೆಗಳು ತಮ್ಮ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ಹೋಗಿ, ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ನಿನ್ನ ಪರವಾಗಿ, ನಿನ್ನ ಪ್ರಜಾ ಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ನಿನಗೆ ಸರಿದೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:9
8 ತಿಳಿವುಗಳ ಹೋಲಿಕೆ  

ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.


ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.


ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.


ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು.


ಕಪ್ಪೆಗಳು ನಿನ್ನನ್ನೂ, ನಿನ್ನ ಮನೆಗಳನ್ನೂ, ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು, ನೈಲ್ ನದಿಯಲ್ಲಿ ಮಾತ್ರ ಇರುವವು” ಎಂದನು.


ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು