Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೂ ಯೆಹೋವನು ಮೋಶೆಗೆ ಹೇಳಿದ್ದಂತೆಯೇ ಆಯಿತು; ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದರು. ಯೆಹೋವ ದೇವರು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:12
13 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.


ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.


ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.


ತರುವಾಯ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಕಳುಹಿಸಿಕೊಡಲು ಒಪ್ಪಲಿಲ್ಲ.


ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.


ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.


ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು