Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ಮಳೆಯಿಂದ ಈಜಿಪ್ಟ್ ದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರು - ಮೃಗಗಳು ಮಾತ್ರವಲ್ಲ ಬಯಲಿನಲ್ಲಿ ಇದ್ದ ಎಲ್ಲವೂ ನಾಶವಾದುವು; ಹೊಲಗದ್ದೆಗಳಲ್ಲಿದ್ದ ಪೈರುಪಚ್ಚೆಗಳೆಲ್ಲವು ಬಿದ್ದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಕಲ್ಲಿನ ಮಳೆ ಐಗುಪ್ತದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬೈಲಿನಲ್ಲಿದ್ದ ಎಲ್ಲವನ್ನೂ ನಷ್ಟಪಡಿಸಿತು. ಆ ಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಎಲ್ಲಾ ಪೈರುಗಳು ಹಾಳಾದವು. ಅಡವಿಯಲ್ಲಿದ್ದ ಮರಗಳು ಮುರಿದು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈಜಿಪ್ಟಿನ ಹೊಲಗಳಲ್ಲಿದ್ದ ಪ್ರತಿಯೊಂದನ್ನೂ ಬಿರುಗಾಳಿ ನಾಶಮಾಡಿತು. ಆಲಿಕಲ್ಲು ಜನರನ್ನೂ ಪ್ರಾಣಿಗಳನ್ನೂ ಸಸ್ಯಗಳನ್ನೂ ನಾಶಮಾಡಿತು; ಹೊಲಗಳಲ್ಲಿದ್ದ ಎಲ್ಲಾ ಮರಗಳನ್ನು ಮುರಿದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ಆಲಿಕಲ್ಲಿನ ಮಳೆಯು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ ಹೊಲದಲ್ಲಿ ಇದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳು ಮಾಡಿ, ಎಲ್ಲಾ ಮರಗಳನ್ನು ಮುರಿದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:25
8 ತಿಳಿವುಗಳ ಹೋಲಿಕೆ  

ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.


ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು’” ಎಂದು ಹೇಳಿದನು.


ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.


ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;


ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು