Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರ ಪಶುಪ್ರಾಣಿಗಳಿಗೂ ಈಜಿಪ್ಟಿನವರ ಪಶುಪ್ರಾಣಿಗಳಿಗೂ ಆತನು ವ್ಯತ್ಯಾಸಮಾಡುವನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯುವುದಿಲ್ಲವೆಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ಪಶುಗಳಿಗೂ ಐಗುಪ್ತ್ಯರ ಪಶುಗಳಿಗೂ ಆತನು ವ್ಯತ್ಯಾಸ ಮಾಡುವನು; ಇಸ್ರಾಯೇಲ್ಯರಿಗಿರುವ ಪಶುಗಳಲ್ಲಿ ಒಂದೂ ಸಾಯುವದಿಲ್ಲವೆಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಇಸ್ರೇಲರ ಪಶುಗಳಿಗೂ ಈಜಿಪ್ಟಿನವರ ಪಶುಗಳಿಗೂ ವ್ಯತ್ಯಾಸ ಮಾಡುವೆನು. ಇಸ್ರೇಲರ ಯಾವ ಪಶುವೂ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಇಸ್ರಾಯೇಲರ ಪಶುಗಳನ್ನೂ ಈಜಿಪ್ಟಿನವರ ಪಶುಗಳನ್ನೂ ವಿಂಗಡಿಸುವರು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯುವುದಿಲ್ಲ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:4
10 ತಿಳಿವುಗಳ ಹೋಲಿಕೆ  

ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.


ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು.


ಇದಲ್ಲದೆ ಯೆಹೋವನು, “ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು” ಎಂದನು.


ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.


“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.


ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು