Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂವಿುಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ, ಇವುಗಳಿಗೆಲ್ಲಾ ಹಾಳುದೆಶೆ ತಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:11
13 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.


ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.


ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.


ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!


ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.


ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.


ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.


ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು