Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:22
38 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.


ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.


ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”


ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.


“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.


ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.


ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.


ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.


ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.


ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.


ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲಲಾರನು, ಪಾದತ್ವರಿತನು ತಪ್ಪಿಸಿಕೊಳ್ಳಲಾರನು, ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.


ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. ಅವರ ಕಿವಿ ಕೇಳದಿರುವುದು.


ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.


ಯಾಕೋಬೇ, ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ. ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.


ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು