Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಶೆಯಲ್ತೀಯೇಲನ ಮಗನೂ ನನ್ನ ಸೇವಕನೂ ಆದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವಾಗಿ ಮಾಡಿಕೊಳ್ಳುವೆನು, ಇದಕ್ಕೆ ನಿನ್ನನ್ನು ಆರಿಸಿಕೊಂಡಿದ್ದೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:23
12 ತಿಳಿವುಗಳ ಹೋಲಿಕೆ  

ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!


ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.


ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು