Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಐಗುಪ್ತದಿಂದ ಪಾರಾಗಿ ಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು [ನೆರವೇರಿಸುವೆನು]; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೇಳುವುದೇನೆಂದರೆ, “‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:5
26 ತಿಳಿವುಗಳ ಹೋಲಿಕೆ  

ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.


ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.


ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ.


‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.


ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.


ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,


‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.


ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು