Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸರನ್ನು ಧಿಕ್ಕರಿಸುವರು; ಸರದಾರರು ಅವರ ಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ತಾತ್ಸಾರಮಾಡಿ ದೂಳದಿಬ್ಬಹಾಕಿ ಆಕ್ರವಿುಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರ ಅರಸನನ್ನು ಧಿಕ್ಕರಿಸುವರು; ಪ್ರಧಾನರು ಅವರನ್ನು ಪರಿಹಾಸ್ಯ ಮಾಡುವರು; ಕೋಟೆಗಳಿಗೆಲ್ಲಾ ಕುಚೋದ್ಯ ಮಾಡುವರು; ಮಣ್ಣಿನ ದಿನ್ನೆಗಳನ್ನು ಮಾಡಿ, ಅವುಗಳನ್ನು ಹಿಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:10
14 ತಿಳಿವುಗಳ ಹೋಲಿಕೆ  

ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,


ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,


ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.


ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.


ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.


“ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು.


“ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು